ಶಿವಮೊಗ್ಗ: ನಗರದ ಹಾಸ್ಟೆಲ್ ನ ಟೆರೇಸ್ ಮೇಲೆ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ..
ಭದ್ರಾವತಿ ತಾಲೂಕು ಗಂಗೂರಿನ ವನಿಷಾ (21) ಮೃತ ವಿದ್ಯಾರ್ಥಿನಿ. ಹಾಸ್ಟೆಲ್ನ ಟೆರೇಸ್ನಲ್ಲಿರುವ ನೀರಿನ ಟ್ಯಾಂಕ್ ಪಕ್ಕದಲ್ಲಿ ವನಿಷಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.ಟೆರೇಸ್ ಮೇಲೆ ಹೋದ ವಿದ್ಯಾರ್ಥಿನಿಯರು ಇದನ್ನು ಗಮನಿಸಿ ಕೂಡಲೇ ವಾರ್ಡನ್ಗೆ ಮಾಹಿತಿ ನೀಡಿದ್ದಾರೆ.
ಮರಣೋತ್ತರ ಪರೀಕ್ಷೆಗಾಗಿ ವಿದ್ಯಾರ್ಥಿನಿಯವರ ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ವನಿಷಾ, ಡಿವಿಎಸ್ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಎಸ್ಸಿ ಪದವಿ ಓದುತ್ತಿದ್ದರು. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ..


