ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಹಾಗೂ ಸುಚಿತ್ರಾ ನಡುವಿನ ಆಡಿಯೋ ಸಂಭಾಷಣೆ ಈಗ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆದ ಹತ್ಯೆ ಪ್ರಕರಣದಲ್ಲಿ ಈ ಇಬ್ಬರೂ ಈಗಾಗಲೇ ಜೈಲು ಪಾಲಾಗಿದ್ದು, ಈ ವೈರಲ್ ಆಡಿಯೋ ಪ್ರಕರಣಕ್ಕೆ ಮತ್ತಷ್ಟು ಭೀಕರ ತಿರುವು ನೀಡಿದೆ.
ಈ ಇಬ್ಬರ ಅನೈತಿಕ ಸಂಬಂಧದ ಬಗ್ಗೆ ಅರಿವಿದ್ದ ಸುಚಿತ್ರಾ ಅವರ ಮಗಳು, ಸಿದ್ದಾಪುರ ಠಾಣೆಯಲ್ಲಿ ದೂರು ನೀಡಿದ್ದೇ ಈ ಎಲ್ಲಾ ಘಟನೆಗಳಿಗೆ ನಾಂದಿಯಾಗಿತ್ತು. ಈ ದೂರಿನಿಂದ ಆಕ್ರೋಶಗೊಂಡ ಸುಚಿತ್ರಾ, ಕಮಲಾಕರ್ ಭಟ್ ಮತ್ತು ಅವರ ಗ್ಯಾಂಗ್, ಸುಚಿತ್ರಾ ಅವರ ಪತಿ ಮಹೇಶ್ ಅವರ ಮನೆಗೆ ದಾಳಿ ನಡೆಸಿದ್ದರು. ಈ ವೇಳೆ ಗಲಾಟೆ ಬಿಡಿಸಲು ಬಂದ ಮಹೇಶ್ ಅವರ ಸಹೋದರ ವಸಂತ್ ನಾಯ್ಕ್ ಅವರನ್ನು ಚಾಕು ಇರಿದು ಕೊಲೆ ಮಾಡಲಾಗಿತ್ತು. ಸದ್ಯ ಕಮಲಾಕರ್ ಭಟ್, ಸುಚಿತ್ರಾ ಸೇರಿದಂತೆ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಈ ವೈರಲ್ ಆಡಿಯೋದಲ್ಲಿ ಇಬ್ಬರೂ ಮಕ್ಕಳ ಬಗ್ಗೆ ಆಡಿರುವ ಮಾತುಗಳು ವಿಕೃತ ಮನಸ್ಥಿತಿಯನ್ನು ಎತ್ತಿ ತೋರಿಸುತ್ತಿದ್ದು, “ಮಗಳು ಇಲ್ಲದಿದ್ದರೆ ನಮ್ಮ ಸುಖಕ್ಕೆ ಪಾರವೇ ಇಲ್ಲ” ಎನ್ನುವಂತಹ ಆತಂಕಕಾರಿ ಮಾತುಗಳು ಜನಸಾಮಾನ್ಯರ ಎದೆಯಲ್ಲಿ ನಡುಕ ಹುಟ್ಟಿಸಿವೆ


