ರಾಜಕೀಯ

ಸುವೇಂದು ಅಧಿಕಾರಿಯ ಪಿಎ ಗುಂಡೇಟಿಗೆ ಬಲಿ

Suvendu Adhikari PA killed in gunshot

ಪ.ಬಂಗಾಳದಲ್ಲಿ ರಾಜಕೀಯ ಉದ್ವಿಗ್ನತೆ ಸೃಷ್ಟಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನೂತನ ಸಿಎಂ ಎಂದು ಬಿಜೆಪಿಯ ಸುವೇಂದು ಅಧಿಕಾರಿ ಅವರ ಹೆಸರು ಚಾಲ್ತಿಗೆ ಬರುತ್ತಿದ್ದಂತೆ ಅವರ ಆಪ್ತ ಸಹಾಯಕನನ್ನು ಬರ್ಬರ ಹತ್ಯೆ ಮಾಡಲಾಗಿದ್ದು ಈ ಘಟನೆ ರಾಜಕೀಯ ವಲಯದಲ್ಲಿ ದೊಡ್ಡ ಆಘಾತ ಸೃಷ್ಟಿಸಿದೆ.ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ ಅವರನ್ನು ಗುಂಡಿಟ್ಟು ಕೊಲ್ಲಲಾಗಿದೆ. ಈ ಘಟನೆ ರಾಜ್ಯದ ರಾಜಕೀಯ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಇದರಿಂದ ಬಂಗಾಳದಲ್ಲಿ ಮತ್ತಷ್ಟು ಉದ್ವಿಗ್ನತೆ ಹೆಚ್ಚಾಗಿದೆ.ಬುಧವಾರ ರಾತ್ರಿ ಸುಮಾರು 10.20 ಕ್ಕೆ ಕೋಲ್ಕತ್ತಾ ವಿಮಾನ ನಿಲ್ದಾಣದ ಸಮೀಪದ ಮಧ್ಯಮಗ್ರಾಮ್ ಲೇನ್‌ನಲ್ಲಿ ಮೋಟಾರ್‌ಸೈಕಲ್‌ನಲ್ಲಿ ಬಂದ ದುಷ್ಕರ್ಮಿಗಳು ಸುವೆಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಾತ್ ಅವರನ್ನು ಹತ್ಯೆ ಮಾಡಿದ್ದಾರೆ.

Comments (0)

Your email address will not be published. Required fields are marked *

Back to top button