Wednesday, August 20, 2025
18.3 C
Bengaluru
Google search engine
LIVE
ಮನೆಜಿಲ್ಲೆಧನಕರ್​ ರಾಜೀನಾಮೆ ಬಗ್ಗೆ ಬಿಜೆಪಿ ಉತ್ತರಿಸಬೇಕು; ಸಂತೋಷ್​ ಲಾಡ್​ ಆಗ್ರಹ

ಧನಕರ್​ ರಾಜೀನಾಮೆ ಬಗ್ಗೆ ಬಿಜೆಪಿ ಉತ್ತರಿಸಬೇಕು; ಸಂತೋಷ್​ ಲಾಡ್​ ಆಗ್ರಹ

ವಿಜಯಪುರ: ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್​ ಧನಕರ್​ ರಾಜೀನಾಮೆ ನೀಡಿರುವ ಬಗ್ಗೆ ಬಿಜೆಪಿಯವರು ಉತ್ತರ ಕೊಡಬೇಕು ಎಂದು ಕಾರ್ಮಿಕ ಸಚಿವ ಸಂತೋಷ್​ ಲಾಡ್​ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದೇಶದಲ್ಲಿ ಪ್ರಜಾಪ್ರಭುತ್ವ ಇಲ್ಲ. ಅದು ಉಪರಾಷ್ಟ್ರಪತಿ ಜಗದೀಪ್​ ಧನಕರ್​ ಅವರಿಗೆ ಈಗಲಾದರೂ ಅರ್ಥವಾಗಿದೆ. ಈ ದೇಶದ ವ್ಯವಸ್ಥೆಯಲ್ಲಿ ಯಾಕೆ ರಾಜೀನಾಮೆ ನೀಡಿದ್ರು..? ಅವರಿಗೆ ಈ ರೀತಿ ಒತ್ತಡ ಯಾಕೆ ಬಂದಿದೆ..?  ಅಥವಾ  ಅವರೇ ಸ್ವ ಇಚ್ಛೆಯಿಂದ ರಾಜೀನಾಮೆ ಕೊಟ್ಟರು ಎಂಬದನ್ನು ಬಿಜೆಪಿ ಅವರ ಬಳಿಯೇ ಕೇಳಬೇಕು ಎಂದು ಹೇಳಿದ್ರು.

ಧರ್ಮಸ್ಥಳ ಘಟನೆ ಕುರಿತು ರಚಿಸಲಾದ ಎಸ್​ಐಟಿಯಿಂದ ಸೌಜನ್ಯ ಪ್ರಕರಣವನ್ನು ಕೈ ಬಿಟ್ಟ ವಿಚಾರದ ಬಗ್ಗೆ ಮಾತನಾಡಿದ ಅವರು ಯಾವ ಕೇಸನ್ನು ಬಿಡಲು ಸಾಧ್ಯವಿಲ್ಲ. ಬಿಡೋದು ಇಲ್ಲ. ಸಿಎಂ ಸಿದ್ದರಾಮಯ್ಯನವರು ಹಾಗೂ ಗೃಹ ಸಚಿವ ಪರಮೇಶ್ವರ್​ ಕಾನೂನಾತ್ಮಕವಾಗಿ ಏನು ಕ್ರಮ ಕೈಗೊಳ್ಳಬೇಕು ಅದನ್ನು ಕೈಗೊಳ್ಳುತ್ತಾರೆ. ಯಾವುದೇ ತಪ್ಪಿತಸ್ಥರನ್ನು ಕೈ ಬಿಡುವ ಪ್ರಶ್ನೆಯೇ ಇಲ್ಲ. ಅವರು ಎಷ್ಟೇ ದೊಡ್ಡವರಾದರು ಕೈ ಬಿಡುವ ಮಾತೇ ಇಲ್ಲ ಎಂದು ಹೇಳಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments