ಕೊಪ್ಪಳ: ರಾಜ್ಯ ರಾಜಕಾರಣದಲ್ಲಿ ಸದ್ಯ ಹನಿಟ್ರ್ಯಾಪ್ ವಿಚಾರ ದೊಡ್ಡ ಸದ್ದು ಮಾಡುತ್ತಿದೆ. ವಿಧಾನಸಭೆ ಅಧಿವೇಶನದಲ್ಲಿ ಸಚಿವ ರಾಜಣ್ಣ ಸ್ಪೋಟಕ ಹೇಳಿಕೆ ಕೊಟ್ಟ ಬಳಿಕ ವ್ಯಾಪಕ ಚರ್ಚೆ ಶುರುವಾಗಿದೆ.
ಈ ಕುರಿತು ಮಾಧ್ಯಮದ ಜೊತೆ ಮಾತನಾಡಿದ ಶಾಸಕ ಗಾಲಿ ಜನಾರ್ದನ ರೆಡ್ಡಿ, ರಾಜ್ಯದ ಸಚಿವರ ಮೇಲಿನ ಹನಿಟ್ರ್ಯಾಪ್ ಪ್ರಕರಣ ಇನ್ನು ಹೆಚ್ಚಾಗುತ್ತವೆ. ಗೃಹಸಚಿವರೇ ಹೇಳಿಕೆ ನೀಡಿದ್ದಾರೆ ಸಂಖ್ಯೆ ಹೇಳೋಕೆ ಆಗಲ್ಲ ಅಂತ. ಈ ಹನಿಟ್ರ್ಯಾಪ್ ಗ್ಯಾಂಗ್ ಹಿಂದೆ ಯಾರಿದ್ದಾರೆ ಅಂತ ಇಡೀ ರಾಜ್ಯದ ಜನರಿಗೆ ಗೊತ್ತಿದೆ. ಸರ್ಕಾರ ಕೂಡಲೇ ಸಿಬಿಐಗೆ ನೀಡಬೇಕು, ಇಲ್ಲ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು. ತನಿಖೆ ನಡೆಸಿ ಈ ಗ್ಯಾಂಗ್ನ ಹಿಂದೆ ಯಾವ ಸಚಿವರಿದ್ದಾರೆಂದು ಬಹಿರಂಗಪಡಿಸಲು ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿಕೆ ಕೊಟ್ಟಿದ್ದಾರೆ.