Wednesday, January 28, 2026
18.8 C
Bengaluru
Google search engine
LIVE
ಮನೆ#Exclusive Newsಆಂಬ್ಯುಲೆನ್ಸ್​ಗೆ ದಾರಿ ಬಿಟ್ಟಾಗ ಸಂಚಾರ ನಿಯಮ ಉಲ್ಲಂಘನೆಯಾದರೆ ದಂಡವಿಲ್ಲ

ಆಂಬ್ಯುಲೆನ್ಸ್​ಗೆ ದಾರಿ ಬಿಟ್ಟಾಗ ಸಂಚಾರ ನಿಯಮ ಉಲ್ಲಂಘನೆಯಾದರೆ ದಂಡವಿಲ್ಲ

ಬೆಂಗಳೂರು ಸಂಚಾರ ವ್ಯವಸ್ಥೆ ನಿಯಂತ್ರಣಕ್ಕೆ ಎಐ ಬಳಕೆ ಹಿನ್ನಲೆ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಹಾಗೂ ಸಂಚಾರ ಜಂಟಿ ಆಯುಕ್ತ ಎಂ.ಎನ್. ಅನುಚೇತ್ ಇಂದು ಸುದ್ದಿಗೋಷ್ಠಿ ಮಾಡಿದ್ದು, ಆಂಬ್ಯುಲೆನ್ಸ್​ಗೆ ದಾರಿ ಬಿಟ್ಟಾಗ ಸಂಚಾರ ನಿಯಮ ಉಲ್ಲಂಘನೆಯಾದರೆ ದಂಡವಿಲ್ಲ ಎಂದು ಹೇಳಿದ್ದಾರೆ.


ಬೆಂಗಳೂರು, ಅಕ್ಟೋಬರ್​ 09: ಆಂಬ್ಯುಲೆನ್ಸ್​ಗೆ (ambulance) ದಾರಿ ಬಿಟ್ಟಾಗ ಚಲನ್ ಆದರೆ ಅವರ ಟ್ರಾಫಿಕ್ ಫೈನ್ ಮನ್ನಾ ಮಾಡುತ್ತೇವೆ ಎಂದು ಸಂಚಾರ ವಿಭಾಗ ಜಂಟಿ ಆಯುಕ್ತ ಎಂ.ಎನ್ ಅನುಚೇತ್ ಹೇಳಿದ್ದಾರೆ. ನಗರದಲ್ಲಿ ಸಂಚಾರ ವ್ಯವಸ್ಥೆ ನಿಯಂತ್ರಣಕ್ಕೆ ಎಐ ಬಳಕೆ ಹಿನ್ನಲೆ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಹಾಗೂ ಸಂಚಾರ ಜಂಟಿ ಆಯುಕ್ತ ಎಂ.ಎನ್. ಅನುಚೇತ್ ಸುದ್ದಿಗೋಷ್ಠಿ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಂ.ಎನ್. ಅನುಚೇತ್, ಯಾರಾದರೂ ಆಂಬ್ಯುಲೆನ್ಸ್​ಗೆ ದಾರಿ ಬಿಟ್ಟಾಗ ದಂಡ ಬೀಳಲ್ಲ. ಒಂದು ವೇಳೆ ಫೈನ್ ಬಿದ್ದರೆ ಅದನ್ನು ಪ್ರಶ್ನೆ ಮಾಡಿ. ನಂತರ ನಾವು ಮನ್ನಾ ಮಾಡುತ್ತೇವೆ ಎಂದು ಹೇಳಿದ್ದಾರೆ.

ಎಐ ತಂತ್ರಜ್ಞಾನ ವೇಳೆ ಆ್ಯಂಬುಲೆನ್ಸ್​ಗೆ ದಾರಿ ಬಿಡಲು ವಾಹನ ಸವಾರರ ಭಯ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಯಾವ ಆ್ಯಂಬುಲೆನ್ಸ್​ಗೆ ಪ್ರಾಮುಖ್ಯತೆ ಕೊಡಬೇಕು ಎನ್ನುವುದನ್ನು ಮೊದಲು ತಿಳಿದುಕೊಳ್ಳಬೇಕು. ಖಾಸಗಿ ಆ್ಯಂಬುಲೆನ್ಸ್ ಚಾಲಕರನ್ನ ಕರೆಸಿ ಸಭೆ ಮಾಡಲಾಗುತ್ತೆ ಎಂದು ತಿಳಿಸಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments