ಮಂಗಳೂರು: ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿಗೆ ವಿದೇಶಿ ವ್ಯಕ್ತಿಗಳಿಂದ ಜೀವ ಬೇದರಿಕೆ ಕರೆಗಳು ಬರ್ತಿವೆ.
ಕೆಂದ್ರ ಸರ್ಕಾರವು ವಕ್ಫ್ ತಿದ್ದುಪಡಿ ಬಿಲ್ನ್ನು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಂಡಿಸಿದ ಬೆನ್ನಲ್ಲೇ ಬೆದರಿಕೆ ಕರೆಗಳು ಬರ್ತಿವೆ. ಈ ಕುರಿತು ಅನ್ವರ್ ಮಾಣಿಪ್ಪಾಡಿ ಅವರು ಮಂಗಳೂರು ನಗರ ಪೋಲಿಸ್ ಕಮಿಷನರ್ಗೆ ಮಾಹಿತಿ ನೀಡಿದ್ದಾರೆ. ಇಂಟರ್ನೇಟ್ ಆಧಾರಿತ ಬೆದರಿಕೆ ಕರೆಗಳು ಬರ್ತಿವೆ ಎಂದು ದೂರಿನಲ್ಲಿ ದಾಖಲಿಸಿದ್ದು, ಈ ಬಗ್ಗೆ ಪೋಲಿಸರು ತನಿಖೆ ನಡೆಸಿದ್ದಾರೆ.
ಇನ್ನು ಲೋಕಸಭೆಯಲ್ಲಿ ವಕ್ಫ್ ಬಿಲ್ ಮೇಲೆ ಚರ್ಚೆ ನಡೆಸುವಾಗ ಗೃಹಸಚಿವ ಅಮಿತ್ ಶಾ ಅವರು, ಅನ್ವರ್ ಮಾಣಿಪ್ಪಾಡಿ ವರದಿ ಪ್ರಸ್ತಾಪಿಸಿದ್ದರು. ಇದಾದ ಬಳಿಕ ಮಾಣಿಪ್ಪಾಡಿ ಅವರಿಗೆ ಬೆದರಿಕೆ ಕರೆಗಳು ಬರ್ತಿವೆ.
ಇಂಟರ್ನೆಟ್ ಕರೆ ಮೂಲಕ ನನಗೆ ನಿರಂತರ ಬೆದರಿಕೆ ಬರುತ್ತಾ ಇದೆ. ಹಿಂದಿ, ಮರಾಠಿ, ಇಂಗ್ಲೀಷ್ ಹಾಗೂ ಉತ್ತರ ಭಾರತದ ಭಾಷೆಗಳಲ್ಲಿ ಕರೆಗಳು ಬರುತ್ತಾ ಇವೆ. ಇಂಗ್ಲಿಷ್ನಲ್ಲಿ ಕರೆ ಮಾಡಿದ ವ್ಯಕ್ತಿ ನೀವು ಹೆಚ್ಚು ದಿನ ಉಳಿಯುವುದಿಲ್ಲ ಎಂದು ಬೆದರಿಕೆ ಹಾಕಿದ್ದಾನೆ. ನಿನ್ನ ಸಮುದಾಯ ನಿನ್ನನ್ನು ಬಿಡಲ್ಲ ಎಂದೆಲ್ಲಾ ಹೇಳಿದ್ದಾನೆ. ಆದರೆ ನನ್ನ ಸಮುದಾಯದ ಬಗ್ಗೆ ನನಗೆ ಖುಷಿ ಇದೆ. ಸದ್ಯ ನಾನು ಮಂಗಳೂರು ಕಮಿಷನರ್ ಅನುಪಮ್ ಅಗರವಾಲ್ಗೆ ಮಾಹಿತಿ ಕೊಟ್ಟಿದ್ದೇನೆ. ನಾನು ಈ ಹಿಂದೆಯೂ ಭದ್ರತೆ ಕೊಟ್ಟಾಗ ವಾಪಾಸ್ ಕಳುಹಿಸಿದ್ದೆ. ಈಗ ತಿದ್ದುಪಡಿ ಮಸೂದೆ ಜಾರಿ ಬಳಿಕ ಮತ್ತೆ ಒಂದಷ್ಟು ಕರೆಗಳು ಬರುತ್ತಿವೆ, ಅದು ಸಾಮಾನ್ಯ ಎಂದಿದ್ದಾರೆ.
ಅನ್ವರ್ ಮಾಣಿಪ್ಪಾಡಿ ಅವರು ಈ ಹಿಂದೆ ರಾಜ್ಯ ವಕ್ಫ್ ಬೋರ್ಡ್ ಹಗರಣವನ್ನು ಬಯಲಿಗೆಳೆದಿದ್ರು, ಅಲ್ಲದೇ ಪ್ರಭಾವಿ ರಾಜಕಾರಣಗಳು ಸಹ ವಕ್ಪ್ ಆಸ್ತಿಯನ್ನು ಕಬಳಿಸಿದ್ದಾರೆ ಎಂದು ಆರೋಪಿಸಿದ್ದರು.