Tuesday, June 24, 2025
25.9 C
Bengaluru
Google search engine
LIVE
ಮನೆ#Exclusive NewsTop Newsರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೈಸೂರಿನ ಮೂವರು ಯುವತಿಯರು ಸಾವು

ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೈಸೂರಿನ ಮೂವರು ಯುವತಿಯರು ಸಾವು

ಮಂಗಳೂರು: ಖಾಸಗಿ ಬೀಚ್ ರೆಸಾರ್ಟ್‌ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿದ ಘಟನೆ ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ರೆಸಾರ್ಟ್‌ವೊಂದರಲ್ಲಿ ನಡೆದಿದೆ.

ಮೃತ ಯುವತಿಯರೆಲ್ಲರೂ 20ರ ಹರೆಯದ ಯುವತಿಯರಾಗಿದ್ದಾರೆ. ಮೃತರನ್ನು ಮೈಸೂರು ಕುರುಬಾರಹಳ್ಳಿ ನಾಲ್ಕನೇ ಕ್ರಾಸ್ ನಿವಾಸಿ  ನಿಶಿತ ಎಂ.ಡಿ. (21), ಮೈಸೂರು ರಾಮಾನುಜ ರಸ್ತೆ, ಕೆ.ಆರ್ ಮೊಹಲ್ಲಾ ನಿವಾಸಿ ಪಾರ್ವತಿ ಎಸ್ (20),  ಮೈಸೂರು ವಿಜಯ ನಗರ ದೇವರಾಜ ಮೊಹಲ್ಲ ನಿವಾಸಿ ಕೀರ್ತನ ಎನ್(21) ಎಂದು ಗುರುತಿಸಲಾಗಿದೆ.

ಈ ಮೂವರು ನಿನ್ನೆ ಬೆಳಗ್ಗೆ ಬೀಚ್ ರೆಸಾರ್ಟ್ ಗೆ ಆಗಮಿಸಿ ಕೊಠಡಿ ಪಡೆದಿದ್ದರು.  ಇಂದು ಬೆಳಿಗ್ಗೆ 8.30ರ ಸುಮಾರಿಗೆ ಸ್ವಿಮ್ಮಿಂಗ್ ಫೂಲ್ ನಲ್ಲಿ ಈಜಲು ತೆರಳಿದ್ದರು. ಮೂವರೇ  ಪೂಲ್‌ನಲ್ಲಿ ಆಟವಾಡುತ್ತಿದ್ದ ವೇಳೆ ಈ ದುರಂತ ನಡೆದಿದೆ. ಈ ಬೀಚ್‌ ಒಂದು ಬದಿಯಲ್ಲಿ ಆರು ಅಡಿಯಷ್ಟು ಆಳವಿತ್ತು. ಈಜುತ್ತಿದ್ದ ವೇಳೆ ಓರ್ವ ಯುವತಿ ಆಯತಪ್ಪಿ ಹೊಂಡಕ್ಕೆ ಹೋಗಿ ಮುಳುಗಿದ್ದು, ಈಕೆಯನ್ನು ರಕ್ಷಿಸಲು ಹೋಗಿ ಒಬ್ಬರಾದ ಮೇಲೆ ಒಬ್ಬರು ಸಾವಿನ ಮನೆ ಸೇರಿದ್ದಾರೆ.

ಸದ್ಯ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಉಳ್ಳಾಲ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್‌ವಾಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಅವರು,  ಇವತ್ತು ಹತ್ತು ಗಂಟೆಗೆ ಮೂವರು ಈಜುಕೊಳಕ್ಕೆ ಇಳಿದಿದ್ದಾರೆ. ಈಜು ಬಾರದ ಯುವತಿ ಆಳ ಇದ್ದ ಕಡೆ ಹೋಗಿ ಸಿಲುಕಿಕೊಂಡಿದ್ದಳು, ಅವಳ ರಕ್ಷಣೆಗೆ ಇನ್ನಿಬ್ಬರು ಆಳ ಇರುವ ಕಡೆ ತೆರಳಿದ್ದರು, ಆದರೆ ಮೂವರಿಗೂ ಈಜು ಬರುತ್ತಿರಲಿಲ್ಲ, ಹೀಗಾಗಿ ಸಾವು ಸಂಭವಿಸಿದೆ. ಈ ಮೂವರು ಮೈಸೂರು ಮೂಲದವರಾಗಿದ್ದು, ಇಂಜಿನಿಯರಿಂಗ್ ಪೈನಲ್ ಇಯರ್ ಸ್ಟೂಡೆಂಟ್‌ಗಳಾಗಿದ್ದರು.  ಇತ್ತ ರೆಸಾರ್ಟ್‌ನಲ್ಲಿ ಲೈಫ್ ಗಾರ್ಡ್ ಯಾರು ಇರಲಿಲ್ಲ, ಈಜುಕೊಳದ ಆಳದ ಬಗ್ಗೆಯೂ ಮಾಹಿತಿ ಫಲಕ ಅಳವಡಿಸಿರಲಿಲ್ಲ, ಘಟನೆ ಬಗ್ಗೆ  ಮನೆಯವರಿಗೆ ಮಾಹಿತಿ ತಿಳಿಸಿದ್ದೇವೆ, ಬೊಬ್ಬೆ ಹೊಡೆದು ಕೂಗಾಡಿದರು ಯಾರು ರಕ್ಷಣೆಗೆ ಬರಲಿಲ್ಲ ಎಂಬ ವಿಚಾರ ತಿಳಿದಿದ್ದು, ಈ  ಈ ಬಗ್ಗೆಯೂ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್‌ವಾಲ್ ಹೇಳಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments