Friday, February 20, 2026
19.1 C
Bengaluru
Google search engine
LIVE
ಮನೆ#Exclusive NewsTop Newsಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಅಂತ್ಯ! ಮಾರ್ಚ್ 2 ಡೆಡ್‌ಲೈನ್

ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಅಂತ್ಯ! ಮಾರ್ಚ್ 2 ಡೆಡ್‌ಲೈನ್

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದ ಕರ್ನಾಟಕ ರಾಜ್ಯ ಸಾರಿಗೆ ನೌಕರರು, ಸರ್ಕಾರದೊಂದಿಗಿನ ಮಾತುಕತೆಯ ನಂತರ ತಮ್ಮ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ.

38 ತಿಂಗಳ ವೇತನ ಹಿಂಬಾಕಿಯ ಪೈಕಿ 26 ತಿಂಗಳ ಬಾಕಿಯನ್ನು ಪಾವತಿಸಲು ಮತ್ತು ವೇತನ ಪರಿಷ್ಕರಣೆ ಮಾಡಲು ಸರ್ಕಾರ ಒಪ್ಪಿಕೊಂಡಿದೆ. ಆದರೆ, ಸಂಪೂರ್ಣ 38 ತಿಂಗಳ ಬಾಕಿ ಹಣವನ್ನೂ ನೀಡಲೇಬೇಕು ಎಂದು ಪಟ್ಟು ಹಿಡಿದಿರುವ ನೌಕರರ ಜಂಟಿ ಕ್ರಿಯಾ ಸಮಿತಿಯು ಸರ್ಕಾರಕ್ಕೆ ಮಾರ್ಚ್ 2ರವರೆಗೆ ಅಂತಿಮ ಗಡುವನ್ನು ನೀಡಿದೆ.

ಕೆಎಸ್​​ಆರ್​​ಟಿಸಿ ವ್ಯವಸ್ಥಾಪಕ ನಿರ್ದೇಶಕರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ನೀಡಿದ ಭರವಸೆಯ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ನಾಳೆಯಿಂದ ರಾಜ್ಯಾದ್ಯಂತ ಬಸ್ ಸಂಚಾರ ಎಂದಿನಂತೆ ಇರಲಿದೆ. ಒಂದು ವೇಳೆ ಮಾರ್ಚ್ 2ರೊಳಗಾಗಿ ಎಲ್ಲಾ ಬೇಡಿಕೆಗಳು ಈಡೇರದಿದ್ದರೆ ಮತ್ತೆ ಹೋರಾಟಕ್ಕೆ ಇಳಿಯುವುದಾಗಿ ನೌಕರರು ಎಚ್ಚರಿಕೆ ನೀಡಿದ್ದಾರೆ. ಸಂಘಟನೆಯ ಈ ನಿರ್ಧಾರಕ್ಕೆ ಕೆಲವು ಸಿಬ್ಬಂದಿಗಳು ಆಕ್ಷೇಪ ವ್ಯಕ್ತಪಡಿಸಿ ಮುಷ್ಕರ ಮುಂದುವರಿಸಲು ಆಗ್ರಹಿಸಿದರಾದರೂ, ಸದ್ಯಕ್ಕೆ ಹೋರಾಟ ತಾತ್ಕಾಲಿಕವಾಗಿ ಅಂತ್ಯಗೊಂಡಿದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments