Wednesday, November 19, 2025
21.1 C
Bengaluru
Google search engine
LIVE
ಮನೆ#Exclusive NewsTop Newsಮಾಸ್ಕ್​ ಧರಿಸಿದ್ದ ಇಬ್ಬರು ವ್ಯಕ್ತಿಗಳಿಂದ ಬಸ್​ಗೆ ಕಲ್ಲೇಟು..!

ಮಾಸ್ಕ್​ ಧರಿಸಿದ್ದ ಇಬ್ಬರು ವ್ಯಕ್ತಿಗಳಿಂದ ಬಸ್​ಗೆ ಕಲ್ಲೇಟು..!

ಗದಗ: ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ಹಮ್ಮಿಕೊಂಡಿದ್ದಾರೆ. ಈ ವೇಳೆ ಹುಬ್ಬಳ್ಳಿಯಿಂದ ಹೊಸಪೇಟೆಗೆ ಹೊರಟಿದ್ದ ಬಸ್​ ಮೇಲೆ ಅನಾಮಿಕರು ಕಲ್ಲೆ ಎಸೆದಿರುವ ಘಟನೆ ನಡೆದಿದೆ.

ಇಂದು ಬೆಳಗ್ಗೆ 7.15 ರ ಸುಮಾರಿಗೆ ಹುಬ್ಬಳ್ಳಿ – ಗದಗ ಬೈಪಾಸ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಹುಬ್ಬಳ್ಳಿಯಿಂದ ಹೊಸಪೇಟೆಗೆ ಹೊರಟಿದ್ದ ಬಸ್​ ಅನ್ನು ಬೈಕ್​ನಲ್ಲಿ ಹಿಂಬಾಲಿಸಿದ ಇಬ್ಬರು ಮುಸುಕುದಾರಿಗಳು ಬಸ್​ ಮುಂದೆ ಬಂದು ಕಲ್ಲು ಎಸೆದು ಪರಾರಿಯಾಗಿದ್ದಾರೆ. ಅದೃಷ್ಟವಶಾತ್​ ಬಸ್​ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ.

ಚಾಲಕ ಭಯಗೊಂಡು ಬಸ್​ನ್ನು ಗದಗ ಬಸ್​ ನಿಲ್ದಾಣಕ್ಕೆ ತಂದು ನಿಲ್ಲಿಸಿದ್ದು, ಪ್ರಯಾಣಿಕರು ಇಳಿಸಿದ್ದಾನೆ. ಇನ್ನು ಈ ಬಗ್ಗೆ ಮಾಹಿತಿ ನೀಡಿರುವ ಬಸ್ ಚಾಲಕ ನಾವು ಹುಬ್ಬಳ್ಳಿಯಿಂದ ಗದಗಕ್ಕೆ ಬರುತ್ತಿದ್ದೆವು ಮತ್ತು ನಾವು ಹುಬ್ಬಳ್ಳಿ ಬೈಪಾಸ್ ತಲುಪಿದಾಗ, ಇಬ್ಬರು ವ್ಯಕ್ತಿಗಳು ಬೈಕ್‌ನಲ್ಲಿ ಬಂದರು ಮತ್ತು ಅವರು ಮುಖಕ್ಕೆ ಮಾಸ್ಕ್ ಧರಿಸಿದ್ದರು. ಹಾಗೂ ವೇಗವಾಗಿ ಬಂದು ಬಸ್​ ಮುಂಭಾಗದ ಗ್ಲಾಸ್​ಗೆ ಕಲ್ಲು ಹೊಡೆದು ಪರಾರಿಯಾಗಿದ್ದಾರೆ. ನಮಗೆ ಅವರ ಮುಖ ಕಾಣಿಸಲಿಲ್ಲ. ಬಳಿಕ ಪ್ರಯಾಣಿಕರನ್ನು ಗದಗ ಬಸ್​ ನಿಲ್ದಾಣದಲ್ಲಿ ಇಳಿಸಲಾಯಿತು ಎಂದು ಬಸ್​ ಚಾಲಕ ಹೇಳಿದ್ದಾನೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments