ಬೆಂಗಳೂರು: ವಂದೇ ಭಾರತ್ ಹೈಸ್ಪೀಡ್ ರೈಲಿಗೆ ಸಿಲು ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಚಿಕ್ಕಬಾಣಾವರ ರೈಲು ನಿಲ್ದಾಣದಲ್ಲಿ ನಡೆದಿದೆ.. ಮೇಲ್ನೋಟಕ್ಕೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ… 19 ವರ್ಷದ ಎಕಿಜ ಶಾಜಿ, 20 ವರ್ಷದ ಜಸ್ಟಿನ್ ಜೀಸೆಫ್ ಮೃತದುರ್ದೈವಿಗಳು.. ಇವರು ಕೇರಳ ಮೂಲದವರಾಗಿದ್ದು, ಸಪ್ತಗಿರಿ ಕಾಲೇಜಿನಲ್ಲಿ ಪ್ರಥಮ Bsc ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು..
ಇನ್ನು ಮೇಲ್ನೋಟಕ್ಕೆ ಇವರು ಆತ್ಮಹತ್ಯೆ ಮಾಡಿಕೊಂಡುವ ಶಂಕೆ ವ್ಯಕ್ತವಾಗಿದೆ… ಆದರೆ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಇಬ್ಬರು ಪಿಜಿಗೆ ಟ್ರ್ಯಾಕ್ ಮೂಲಕ ಹೋಗುವ ವೇಳೆ ಸ್ಪೀಡಾಗಿ ಬಂದ ವಂದೇ ಭಾರತ್ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ..
ಈ ಸಂಬಂಧ UDR (ಅಸಹಜ ಸಾವಿನ ವರದಿ) ಅಡಿಯಲ್ಲಿ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಯುವಕ-ಯುವತಿ ಬಗ್ಗೆ ಮಾಹಿತಿ ಕಲೆಹಾಕಲು ಮುಂದಾಗಿದ್ದಾರೆ. ಮೃತದೇಹಗಳನ್ನ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಇರಿಸಲಾಗಿದೆ.


