ವೈರಲ್ ನ್ಯೂಸ್ಸುದ್ದಿ

ಭಗವದ್ಗೀತೆ ಕಥನ ನಡೆಯುವ ಜಾಗದಲ್ಲಿ ನೂರಾರು ಮಹಿಳೆಯರ ಹಿಂದೆ ಅಂಡರ್​ವೇರ್​ನಲ್ಲಿ ಕುಳಿತ ಪೊಲೀಸ್​

ಉನ್ನಾವೋದ ದೇವಸ್ಥಾನದ ಮುಂಭಾಗ ಭಗವದ್ಗೀತೆ ಕಥನ ನಡೆಯುತ್ತಿದ್ದ ಜಾಗದಲ್ಲಿ ನೂರಾರು ಮಹಿಳೆಯರ ಹಿಂದೆ ಪೊಲೀಸ್ ಅಧಿಕಾರಿಯೊಬ್ಬರು ​ ಅಂಡರ್​ವೇರ್​ನಲ್ಲಿ ಕುಳಿತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಎಸ್​ಪಿ ಕ್ರಮ ಕೈಗೊಂಡಿದ್ದಾರೆ. ಅಚಲಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಕೊಲುಹಗಡ ಗ್ರಾಮದಲ್ಲಿ ಚಂದ್ರಿಕಾ ಮಾತೆಯ ದೇವಾಲಯವಿದೆ ಆ ದೇವಸ್ಥಾನದ ಆವರಣದಲ್ಲಿ ಪೊಲೀಸ್ ಠಾಣೆಯೂ ಇದೆ.

ದೇವಸ್ಥಾನದಲ್ಲಿ ಭಗವದ್ಗೀತೆ ಕಥನ ನಡೆಯುತ್ತಿತ್ತು, ಮಹಿಳೆಯರೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಹೊರಠಾಣೆ ಪ್ರಭಾರಿ ರಾಮ್​ನಿವಾಸ್ ಯಾದವ್, ಕೇವಲ ಒಳ ಉಡುಪು ಧರಿಸಿ, ತನ್ನ ಕೋಣೆಯ ಹೊರಗಿನ ವರಾಂಡಾದಲ್ಲಿ ಖುರ್ಚಿಯ ಮೇಲೆ ಕುಳಿತು ತನ್ನ ಮೊಬೈಲ್ ನೋಡುತ್ತಿದ್ದ ದೃಶ್ಯ ಸೆರೆಯಾಗಿತ್ತು.

ಅಲ್ಲಿದ್ದವರೊಬ್ಬರು ತಕ್ಷಣವೇ ಓಡಿಹೋಗಿ ರಾಮ್​ನಿವಾಸ್​ ಬಳಿ ಲುಂಗಿ ಅಥವಾ ಪಂಚೆ ಸುತ್ತಿಕೊಳ್ಳುವಂತೆ ಮನವಿ ಮಾಡಿದರು ಆದರೆ ಯಾರ ಮಾತಿಗೂ ಪೊಲೀಸ್ ಕಿವಿಗೊಡಲಿಲ್ಲ.

ಎಸ್ಪಿ ಸಿದ್ಧಾರ್ಥ್ ಶಂಕರ್ ಮೀನಾ ಅವರು ವೈರಲ್ ವಿಡಿಯೋವನ್ನು ಗಮನದಲ್ಲಿಟ್ಟುಕೊಂಡು ಹೊರಠಾಣೆ ಪ್ರಭಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಸ್‌ಒಗೆ ಸೂಚಿಸಿದರು. ತನಿಖೆ ನಡೆಸುವಂತೆ ಬಿಘಾಪುರ ಸಿಒ ಮಾಯಾ ರೈ ಅವರಿಗೆ ಎಸ್‌ಪಿ ಸೂಚಿಸಿದರು.

ಸಿಒ ಅವರ ವರದಿಯ ಮೇರೆಗೆ, ಕೊಲುಹಗಡ ಪೊಲೀಸ್ ಪೋಸ್ಟ್ ಇನ್‌ಚಾರ್ಜ್ ರಾಮ್​ನಿವಾಸ್ ಯಾದವ್ ಅವರನ್ನು ಅಚಲಗಂಜ್ ಪೊಲೀಸ್ ಠಾಣೆಯಿಂದ ಪೊಲೀಸ್ ಲೈನ್‌ಗೆ ಕಳುಹಿಸಲಾಗಿದೆ. ಇನ್‌ಸ್ಪೆಕ್ಟರ್ ವಿನಯ್ ಮಿಶ್ರಾ ಅವರಿಗೆ ಔಟ್‌ಪೋಸ್ಟ್‌ನ ಉಸ್ತುವಾರಿ ನೀಡಲಾಗಿದೆ. ಬೆಳಗ್ಗೆ 9 ಗಂಟೆ ಸುಮಾರಿಗೆ ಸ್ನಾನಕ್ಕೆ ಹೋಗಿದ್ದೆ, ಬಟ್ಟೆ ಮತ್ತು ಟವೆಲ್ ತೊಳೆದ ನಂತರ ಕರೆಂಟ್​ ಕೈಕೊಟ್ಟಿತ್ತು, ನೀರಿನ ಅಭಾವದಿಂದ ಈ ಸ್ಥಿತಿಯಲ್ಲಿ ಖುರ್ಚಿ ಮೇಲೆ ಕೂರಬೇಕಾಯಿತು ಎಂದು ಸಬೂಬು ಹೇಳಿದ್ದಾರೆ.

Comments (0)

Your email address will not be published. Required fields are marked *

Back to top button