Bengaluru :
ಕರ್ನಾಟಕ ವಿಧಾನ ಮಂಡಲದಲ್ಲಿ ಇ-ಲೆಜಿಸ್ಲೇಚರ್(ಇ-ವಿಧಾನ ಯೋಜನೆ) ಜಾರಿ ಸಂಬಂಧ ಅಧ್ಯಯನ ಪ್ರವಾಸದಲ್ಲಿರುವ ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ , ಶಿಮ್ಲಾದಲ್ಲಿ ಹಿಮಾಚಲ ಪ್ರದೇಶದ ವಿಧಾನ ಸಭೆಯ ಸಭಾಧ್ಯಕ್ಷರಾದ ಕುಲದೀಪ್ ಸಿಂಘ್ ಪತಾನಿಯ ಅವರನ್ನು ಭೇಟಿ ಮಾಡಿ, ಅಗತ್ಯ ಮಾಹಿತಿಯನ್ನು ಪಡೆದರು. ಈ ವೇಳೆ ಹಿಮಾಚಲ ಪ್ರದೇಶದ ವಿಧಾನಸಭೆಯ ಇತರೆ ಕಾರ್ಯ ಚಟುವಟಿಕೆಗಳ ಬಗ್ಗೆಯೂ ಸಹ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಹಿಮಾಚಲ ಪ್ರದೇಶ ವಿಧಾನ ಸಭೆಯ ಕಾರ್ಯದರ್ಶಿ ಯಶಪಾಲ್ ಶರ್ಮಾ, ಕರ್ನಾಟಕ ವಿಧಾನ ಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಮತ್ತು ವಿಧಾನ ಪರಿಷತ್ತಿನ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮಿ ಹಾಗೂ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.