Wednesday, April 30, 2025
29.2 C
Bengaluru
LIVE
ಮನೆಜಿಲ್ಲೆವೈರಮುಡಿ ಬ್ರಹ್ಮೋತ್ಸವ: ಸಕಲ ಸಿದ್ಧತೆ ನಡೆಸಿ: ಎನ್ ಚಲುವರಾಯಸ್ವಾಮಿ

ವೈರಮುಡಿ ಬ್ರಹ್ಮೋತ್ಸವ: ಸಕಲ ಸಿದ್ಧತೆ ನಡೆಸಿ: ಎನ್ ಚಲುವರಾಯಸ್ವಾಮಿ

ಮೈಸೂರು :  ಜಿಲ್ಲಾಡಳಿತದ ವತಿಯಿಂದ ಮಾರ್ಚ್ 16  ರಿಂದ 28 ರವರೆಗೆ  ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವಗಳು ನಡೆಯಲಿದ್ದು, ಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಸಭಾಂಗಣದಲ್ಲಿ 2024 ನೇ ಸಾಲಿನ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ ಕಾರ್ಯಕ್ರಮದ ಪೂರ್ವ ಸಿದ್ಧತಾ  ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಾಲಯದಲ್ಲಿ ಮಾರ್ಚ್ 21 ರಂದು  ಶ್ರೀ ವೈರಮುಡಿ ಕಿರೀಟ ಧಾರಣೆ ಮತ್ತು ಉತ್ಸವ ನಡೆಯಲಿದೆ. ಉತ್ಸವದಲ್ಲಿ ಯಾವುದೇ ಲೋಪವಾಗದಂತೆ ಮುಂಜಾಗ್ರತೆವಹಿಸಿ ಎಂದರು. ವೈರಮುಡಿ ಬ್ರಹ್ಮೋತ್ಸವಕ್ಕೆ  ಆಗಮಿಸುವ ಭಕ್ತಾಧಿಗಳಿಗೆ ಮೂಲಭೂತ ವ್ಯವಸ್ಥೆಗಳಾದ ಶುದ್ಧ ಕುಡಿಯುವ ನೀರು, ಅಗತ್ಯವಿರುವ ಸ್ಥಳಗಳಲ್ಲಿ ತಾತ್ಕಾಲಿಕ ಶೌಚಾಲಯದ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ ಮಾಡಿ ಜೊತೆಗೆ ಮೇಲುಕೋಟೆಯ ಪ್ರಮುಖ ರಸ್ತೆಗಳನ್ನು ದುರಸ್ತಿಗೊಳಿಸಿ ಎಂದರು.

ಬ್ರಹ್ಮೋತ್ಸವ ಸಂಬಂಧ ಸರ್ಕಾರದಿಂದ ಅನುದಾನ ಬಿಡುಗಡೆಗೆ ಕ್ರಮವಹಿಸಲಾಗುವುದು. ತಕ್ಷಣಕ್ಕೆ ತಾತ್ಕಾಲಿಕವಾಗಿ ಅನುದಾನ ಬಿಡುಗಡೆಗೊಳಿಸಲಾಗುವುದು ಮೂಲಭೂತ ಸೌಲಭ್ಯ ಕೆಲಸ ಪ್ರಾರಂಭಿಸಿ ಎಂದರು. ಸ್ಥಳೀಯ ಶಾಸಕರ ಸಲಹೆಯಂತೆ ಕೆಲಸಗಳನ್ನು ಪ್ರಾರಂಭಿಸಿರಿ. ಜೊತೆಗೆ ಸಾರ್ವಜನಿಕರ ಸಹಕಾರವು ಅತ್ಯಗತ್ಯ ಎಂದರು.

ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಮಾತನಾಡಿ ಭಕ್ತಾಧಿಗಳಿಗೆ ವಾಹನ ಪಾರ್ಕಿಂಗ್ ಗಾಗಿ ಸ್ಥಳ ಗುರುತಿಸಿ ಸಮತಟ್ಟು ಮಾಡಿ, ಪಾರ್ಕಿಂಗ್ ಸ್ಥಳದಲ್ಲಿ ಕುಡಿಯುವ ನೀರು, ಶೌಚಾಲಯಗಳಂತಹ ಮೂಲಭೂತ ಸೌಲಭ್ಯ ನೀಡಿ. ವಾಹನ ಪಾರ್ಕಿಂಗ್ ಸ್ಥಳದಲ್ಲಿ ವಿದ್ಯುತ್ ದೀಪಗಳ ವ್ಯವಸ್ಥೆ, ಸುಗಮ ವಾಹನ ಸಂಚಾರಕ್ಕಾಗಿ ಹಾಗೂ ಭಕ್ತಾದಿಗಳ ಅನುಕೂಲಕ್ಕಾಗಿ ಅಗತ್ಯವಿರುವ ಕೆ.ಎಸ್.ಆರ್.ಟಿ.ಸಿ. ಬಸ್ ಗಳ ವ್ಯವಸ್ಥೆಯನ್ನು ಮಾಡಿಕೊಳ್ಳಿ ಎಂದರು.

ಜಿಲ್ಲೆ ಹಾಗೂ ತಾಲ್ಲೂಕು ಕೇಂದ್ರದಿಂದ ಮೇಲುಕೋಟೆಗೆ 140 ಕೆ.ಎಸ್.ಆರ್.ಟಿ.ಸಿ ಬಸ್ ವ್ಯವಸ್ಥೆ ಮಾಡಲಾಗಿದ್ದು, ಜೊತೆಗೆ ಬಸ್ ಪಾರ್ಕಿಂಗ್ ಸ್ಥಳದಿಂದ ದೇವಾಲಯಕ್ಕೆ 10 ಉಚಿತ ಬಸ್ ವ್ಯವಸ್ಥೆ ಮಾಡಲಾಗುವುದು. ಮಹೋತ್ಸವವನ್ನು ಅಚ್ಚುಕಟ್ಟಾಗಿ ನಡೆಸಲು ಸ್ವಾಗತ, ಆಹಾರ, ಸ್ವಚ್ಚತೆ ಸೇರಿದಂತೆ ವಿವಿಧ  ಸಮಿತಿ ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ವಿಧಾನಸಭೆ ಶಾಸಕರಾದ ಎ.ಬಿ ರಮೇಶ್ ಬಂಡಿಸಿದ್ದೇಗೌಡ, ಪಿ.ರವಿಕುಮಾರ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್, ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗರಾಜು ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments