Thursday, November 20, 2025
19.1 C
Bengaluru
Google search engine
LIVE
ಮನೆ#Exclusive NewsTop Newsವಾಲ್ಮೀಕಿ ಹಗರಣ ಪ್ರಕರಣ: ತನಿಖೆಯನ್ನು ಸಿಬಿಐಗೆ ವಹಿಸಲು ಹೈಕೋರ್ಟ್ ನಕಾರ

ವಾಲ್ಮೀಕಿ ಹಗರಣ ಪ್ರಕರಣ: ತನಿಖೆಯನ್ನು ಸಿಬಿಐಗೆ ವಹಿಸಲು ಹೈಕೋರ್ಟ್ ನಕಾರ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಹೊಣೆ ಸಿಬಿಐಗೆ ವಹಿಸಲು ಹೈಕೋರ್ಟ್ ನಕಾರವೆತ್ತಿದೆ. ಆ ಮೂಲಕ ಹಗರಣದ ತನಿಖೆಯನ್ನು ಕೇಂದ್ರಕ್ಕೆ ವರ್ಗಾಯಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ರಿಟ್​ ಅರ್ಜಿಯನ್ನು ವಜಾಗೊಳಿಸಿ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ.

ಬ್ಯಾಂಕಿಂಗ್​ ನಿಯಂತ್ರಣ ಅಧಿನಿಯಮ ಸೆಕ್ಷನ್ 35 ಎ ಅಡಿಯ ವ್ಯಾಖ್ಯಾನ ಪರಿಗಣಿಸಿ ಸಿಬಿಐ ತನಿಖೆಗೆ ವಹಿಸಲಾಗುವುದಿಲ್ಲ. ಒಂದು ವೇಳೆ ಅನುಮತಿ ನೀಡಿದರೆ ಎಲ್ಲಾ ಬ್ಯಾಂಕ್​ಗಳೂ ಇದನ್ನೇ ಕೇಳಬಹುದು. ಆಗ ದೆಹಲಿ ಸ್ಪೆಷಲ್​ ಪೊಲೀಸ್ ಎಸ್ಟಾಬ್ಲಿಷ್​ಮೆಂಟ್​ ಆ್ಯಕ್ಟ್​ ನಿರರ್ಥಕವಾಗಬಹುದು ಎಂದು ಅರ್ಜಿ ತಿರಸ್ಕರಿಸಿ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ ಪಟ್ಟಿದೆ.

ಹಗರಣದ ತನಿಖೆ ಹೊಣೆ ಸಿಬಿಐಗೆ ವರ್ಗಾಯಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನಂತರ ಹೈಕೋರ್ಟ್ ಸೆಪ್ಟೆಂಬರ್ 30 ರಂದು ತನ್ನ ಆದೇಶವನ್ನು ಕಾಯ್ದಿರಿಸಿತ್ತು. ಯೂನಿಯನ್​ ಬ್ಯಾಂಕ್​ ಅರ್ಜಿಗೆ ರಾಜ್ಯ ಸರ್ಕಾರ ವಿರೋಧ ವ್ಯಕ್ತಪಡಿಸಿತ್ತು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವ ಅಧಿಕಾರ ರಾಜ್ಯ ಪೊಲೀಸರಿಗೆ ಇದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿತ್ತು.

ವಿಚಾರಣೆ ವೇಳೆ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಬಿ. ವಿ. ಆಚಾರ್ಯ, ಬ್ಯಾಂಕ್ ಸಲ್ಲಿಸಿರುವ ಅರ್ಜಿಯ ನಿರ್ವಹಣೆಯ ಬಗ್ಗೆ ಪ್ರಾಥಮಿಕ ಆಕ್ಷೇಪಣೆ ಎತ್ತಿದ್ದಾರೆ. ತನಿಖೆಯ ಅಧಿಕಾರ ರಾಜ್ಯ ಸರ್ಕಾರಕ್ಕಿದೆ. ತನಿಖೆ ಕಳಂಕಿತವೆಂದು ಯೂನಿಯನ್ ಬ್ಯಾಂಕ್ ಹೇಳಿಲ್ಲ. ಕೇವಲ ಬ್ಯಾಂಕ್ ನಿಯಂತ್ರಣ ಅಧಿನಿಯಮ ಸೆಕ್ಷನ್​ 35ಎ ಉಲ್ಲೇಖಿಸಲಾಗಿದೆ. ತನಿಖೆಯ ವ್ಯಾಪ್ತಿ ಬಗ್ಗೆ ಸುಪ್ರೀಂಕೋರ್ಟ್ ಮಾತ್ರ ತೀರ್ಮಾನಿಸಬೇಕು. ಹೀಗಾಗಿ ಅರ್ಜಿ ವಿಚಾರಣೆಗೆ ಯೋಗ್ಯವಲ್ಲವೆಂದು ವಾದಿಸಿದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments