Monday, June 23, 2025
26.6 C
Bengaluru
Google search engine
LIVE
ಮನೆ#Exclusive Newsವಿ.ಡಿಸಾವರ್ಕರ್ ಮಾನನಷ್ಟ ಪ್ರಕರಣ: ಪುಣೆ ನ್ಯಾಯಾಲಯಕ್ಕೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಸಮನ್ಸ್​

ವಿ.ಡಿಸಾವರ್ಕರ್ ಮಾನನಷ್ಟ ಪ್ರಕರಣ: ಪುಣೆ ನ್ಯಾಯಾಲಯಕ್ಕೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಸಮನ್ಸ್​

ಪುಣೆ ಅಕ್ಟೋಬರ್ 05: ವಿನಾಯಕ ದಾಮೋದರ್ ಸಾವರ್ಕರ್  ಅವರ ಮೊಮ್ಮಗ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯವು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ  ಸಮನ್ಸ್ ನೀಡಿದೆ. ಅಕ್ಟೋಬರ್ 23 ರಂದು ರಾಹುಲ್ ಗಾಂಧಿ ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ. ಈ ಹಿಂದೆ ಹಿಂದುತ್ವದ ಐಕಾನ್ ವೀರ್ ಸಾವರ್ಕರ್ ವಿರುದ್ಧ ಕಾಂಗ್ರೆಸ್ ನಾಯಕ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು ಎಂದು ಸತ್ಯಕಿ ಸಾವರ್ಕರ್ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ. ವೀರ್ ಸಾವರ್ಕರ್ ಅವರು ತಮ್ಮ ಸ್ನೇಹಿತರೊಂದಿಗೆ ಮುಸ್ಲಿಂ ವ್ಯಕ್ತಿಯನ್ನು ಥಳಿಸಿರುವ ಬಗ್ಗೆ ಪುಸ್ತಕದಲ್ಲಿ ಬರೆದಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ. ಸಾವರ್ಕರ್ ಅವರು “ಹಿಂಸಾಚಾರವನ್ನು ನಡೆಸಲು ಸಂತೋಷವಾಗಿದ್ದಾರೆ” ಎಂದು ರಾಹುಲ್ ಗಾಂಧಿ ಹೇಳಿದ್ದರು.

ರಾಹುಲ್ ಗಾಂಧಿ ಆರೋಪವನ್ನು ವೀರ್ ಸಾವರ್ಕರ್ ಮೊಮ್ಮಗ ಅಲ್ಲಗಳೆದಿದ್ದಾರೆ. ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ನಿರಾಕರಿಸಿದ ಸತ್ಯಕಿ ಸಾವರ್ಕರ್ ತಮ್ಮ ಆರೋಪಗಳನ್ನು “ಕಾಲ್ಪನಿಕ, ಸುಳ್ಳು ಮತ್ತು ದುರುದ್ದೇಶಪೂರಿತ” ಎಂದು ಹೇಳಿದ್ದಾರೆ. ಆರೋಪದ ಬಗ್ಗೆ ತನಿಖೆ ನಡೆಸುವಂತೆ ನ್ಯಾಯಾಲಯ ಪೊಲೀಸರಿಗೆ ಸೂಚಿಸಿದರೆ, ರಾಹುಲ್ ಗಾಂಧಿ ಅವರ ಹೇಳಿಕೆಯಲ್ಲಿ ಅಂತಹ ಯಾವುದೇ ಸತ್ಯವಿಲ್ಲ ಎಂದು ಆರಂಭಿಕ ತನಿಖೆಯಲ್ಲಿ ಕಂಡುಬಂದಿದೆ.

ಸಾವರ್ಕರ್ ಅವರನ್ನು ಹಲವಾರು ವರ್ಷಗಳಿಂದ ರಾಹುಲ್ ಗಾಂಧಿ ಪದೇ ಪದೇ ಮಾನಹಾನಿ ಮತ್ತು ನಿಂದನೆ ಮಾಡುತ್ತಿದ್ದಾರೆ ಎಂದು ಸತ್ಯಕಿ ಸಾವರ್ಕರ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. “ಅಂತಹ ಒಂದು ಸಂದರ್ಭದಲ್ಲಿ, ಮಾರ್ಚ್ 5, 2023 ರಂದು, ರಾಹುಲ್ ಗಾಂಧಿ ಯುನೈಟೆಡ್ ಕಿಂಗ್‌ಡಮ್‌ನಲ್ಲಿ ಸಾಗರೋತ್ತರ ಕಾಂಗ್ರೆಸ್‌ನ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ, ಅವರು ಉದ್ದೇಶಪೂರ್ವಕವಾಗಿ ಸಾವರ್ಕರ್ ವಿರುದ್ಧ ಆರೋಪಗಳನ್ನು ಮಾಡಿದರು. ಅದು ಸುಳ್ಳು ಎಂದು ತಿಳಿದಿದ್ದರು ಸಾವರ್ಕರ್ ಅವರ ಪ್ರತಿಷ್ಠೆಗೆ ಧಕ್ಕೆ ತರಲು ಅವರು ಹೀಗೆ ಮಾಡಿದ್ದಾರೆ ಎಂದು” ದೂರಿನಲ್ಲಿ ಸತ್ಯಕಿ ಸಾವರ್ಕರ್ ಹೇಳಿದ್ದಾರೆ.

‘ರಾಹುಲ್ ಗಾಂಧಿ ಉಪಸ್ಥಿತಿ ಅಗತ್ಯ’

ಕಳೆದ ತಿಂಗಳು ಪ್ರಕರಣವನ್ನು ಮತ್ತೊಬ್ಬ ನ್ಯಾಯಾಧೀಶರಿಗೆ ವರ್ಗಾಯಿಸಲಾಗಿತ್ತು. ಜಂಟಿ ಸಿವಿಲ್ ನ್ಯಾಯಾಧೀಶರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಪ್ರಥಮ ದರ್ಜೆ) ಅಮೋಲ್ ಶಿಂಧೆ ಪ್ರಕರಣದ ವಿಚಾರಣೆ ನಡೆಸಲಿದ್ದಾರೆ. ಪಿಟಿಐ ಜೊತೆ ಮಾತನಾಡಿದ ಸತ್ಯಕಿ ಸಾವರ್ಕರ್ ಪರವಾಗಿ ವಾದ ಮಂಡಿಸುತ್ತಿರುವ ವಕೀಲ ಸಂಗ್ರಾಮ್ ಕೊಲ್ಹಟ್ಕರ್, ಕಾಂಗ್ರೆಸ್ ನಾಯಕನ ವಿರುದ್ಧ ಸಮನ್ಸ್ ಜಾರಿ ಮಾಡಲಾಗಿದ್ದು, ಅವರು ಮಾಡಿರುವ ಆರೋಪಗಳಿಗೆ ಉತ್ತರಿಸಲು ಅವರ ಉಪಸ್ಥಿತಿ ಅಗತ್ಯವಾಗಿದೆ ಎಂದು ಹೇಳಿದರು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments