ನವದೆಹಲಿ: ಉಪರಾಷ್ಟ್ರಪತಿ ಜಗದೀಪ್ ಧನ್ಖರ್ ಅವರಿಗೆ ಇಂದು ಬೆಳಗಿನ ಜಾವ ಎದೆಗೋವು ಕಾಣಿಸಿಕೊಂಡಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರನ್ನು ಕ್ರಿಟಿಕಲ್ ಕೇರ್ ಯೂನಿಟ್ನಲ್ಲಿ ಇರಿಸಲಾಗಿದ್ದು, ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ. ರಾವೀವ್ ನಾರಂಗ್ ಅವರ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಉಪರಾಷ್ಟ್ರಪತಿ ಜಗದೀಪ್ ಧನ್ಖರ್ ಆಸ್ಪತ್ರೆಗೆ ದಾಖಲಾದ ಬೆನ್ನಲ್ಲೆ, ಅವರ ಆರೋಗ್ಯ ವಿಚಾರಿಸಲು ಪ್ರಧಾನಿ ನರೇಂದ್ರ ಮೋದಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ ಅವರು, ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಉಪರಾಷ್ಟ್ರಪತಿ ಜಗದೀಪ್ ಧನ್ಖರ್ ಅವರ ಆರೋಗ್ಯ ವಿಚಾರಿಸಿದ್ದೇನೆ. ಅವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ.