Wednesday, April 30, 2025
29.2 C
Bengaluru
LIVE
ಮನೆ#Exclusive NewsTop Newsಉಪರಾಷ್ಟ್ರಪತಿ ಏಮ್ಸ್​ಗೆ ದಾಖಲು; ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ ಪ್ರಧಾನಿ

ಉಪರಾಷ್ಟ್ರಪತಿ ಏಮ್ಸ್​ಗೆ ದಾಖಲು; ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ ಪ್ರಧಾನಿ

ನವದೆಹಲಿ: ಉಪರಾಷ್ಟ್ರಪತಿ ಜಗದೀಪ್ ಧನ್​ಖರ್ ಅವರಿಗೆ ಇಂದು ಬೆಳಗಿನ ಜಾವ ಎದೆಗೋವು ಕಾಣಿಸಿಕೊಂಡಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.  ಸದ್ಯ ಅವರನ್ನು ಕ್ರಿಟಿಕಲ್ ಕೇರ್ ಯೂನಿಟ್​ನಲ್ಲಿ ಇರಿಸಲಾಗಿದ್ದು, ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ. ರಾವೀವ್ ನಾರಂಗ್ ಅವರ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ಉಪರಾಷ್ಟ್ರಪತಿ ಜಗದೀಪ್ ಧನ್​ಖರ್ ಆಸ್ಪತ್ರೆಗೆ ದಾಖಲಾದ ಬೆನ್ನಲ್ಲೆ, ಅವರ ಆರೋಗ್ಯ ವಿಚಾರಿಸಲು ಪ್ರಧಾನಿ ನರೇಂದ್ರ ಮೋದಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ ಅವರು, ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಉಪರಾಷ್ಟ್ರಪತಿ ಜಗದೀಪ್ ಧನ್​ಖರ್ ಅವರ ಆರೋಗ್ಯ ವಿಚಾರಿಸಿದ್ದೇನೆ. ಅವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments