ರೇಣುಕಾಸ್ವಾಮಿ ಕೊಲೆ (Renukaswamy Murder Case) ವಿಚಾರವಾಗಿ ದರ್ಶನ್ (Darshan) ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಪ್ರಕರಣವಾಗಿ ಮಾತನಾಡಲು ಇದೀಗ ಸದಾಶಿವನಗರದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K. Shivakumar) ನಿವಾಸಕ್ಕೆ ದರ್ಶನ್ ಪತ್ನಿ ವಿಜಯಲಕ್ಷ್ಮಿ (Vijayalakshmi) ಭೇಟಿ ನೀಡಿದ್ದಾರೆ. ದರ್ಶನ್ ಪ್ರಕರಣದ ಕುರಿತು ವಿಜಯಲಕ್ಷ್ಮಿ, ದಿನಕರ್ ತೂಗುದೀಪ್, ನಿರ್ದೇಶಕ ಪ್ರೇಮ್ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ಗೆ ಅನ್ಯಾಯ ಆಗಿದ್ಯಾ? ಹೇಗೆ ಎಂದು ಡಿ.ಕೆ.ಶಿವಕುಮಾರ್ ವಿಚಾರಿಸಿದ್ದಾರೆ.