Wednesday, September 10, 2025
23.3 C
Bengaluru
Google search engine
LIVE
ಮನೆಜಿಲ್ಲೆಮಸೀದಿಯಲ್ಲಿ ವಿಘ್ನೇಶ್ವರನ ಮೂರ್ತಿ ಪ್ರತಿಷ್ಠಾಪಿಸಿ ಭಾವೈಕ್ಯತೆ ಮೆರೆದ ಗ್ರಾಮಸ್ಥರು

ಮಸೀದಿಯಲ್ಲಿ ವಿಘ್ನೇಶ್ವರನ ಮೂರ್ತಿ ಪ್ರತಿಷ್ಠಾಪಿಸಿ ಭಾವೈಕ್ಯತೆ ಮೆರೆದ ಗ್ರಾಮಸ್ಥರು

ಗದಗ ಜಿಲ್ಲೆ ರೋಣ ತಾಲೂಕಿನ ಸಂದಿವಾಡ ಗ್ರಾಮಸ್ಥರು ಮಸೀದಿಯಲ್ಲಿ ಗಣೇಶನ ಮೂರ್ತಿ ಪತ್ರಷ್ಠಾಪನೆ ಮಾಡಿ ಭಾವೈಕ್ಯತೆ ಮೆರೆದಿದ್ದಾರೆ.

ಜಾತಿ, ಧರ್ಮಗಳ ಹೆಸರಿನಲ್ಲಿ ಕಿತ್ತಾಟ ಮಾಡುವವರಿಗೆ ಸಂದಿಗವಾಡ ಗ್ರಾಮಸ್ಥರು ಮಾದರಿಯಾಗಿದೆ. ಕಳೆದ 3 ವರ್ಷಗಳಿಂದ ಸಂದಿಗವಾಡದ ಮಸೀದಿಯಲ್ಲಿ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುತ್ತಾ ಬಂದಿದ್ದಾರೆ. ಸ್ವತಃ ಮುಸ್ಲಿಂ ಯುವಕರೇ ಸೇರಿ ಗಣೇಶ ಮೂರ್ತಿಯನ್ನು ತಂದು ಮಸೀದಿಯಲ್ಲಿ ಪ್ರತಿಷ್ಠಾಪಿಸಿದ್ದು ಗಮನಾರ್ಹವಾಗಿದೆ. ಮುಸ್ಲಿಂ ಯುವಕರ ಜೊತೆಗೆ ಹಿಂದುಗಳು ಸೇರಿ ಒಟ್ಟಾಗಿ ಗಣೇಶನ ಪೂಜಾ ಕೈಂಕರ್ಯದಲ್ಲಿ ಪಾಲ್ಗೊಳ್ಳುವ ಮೂಲಕ ಸಾಮರಸ್ಯ, ಭಾವೈಕ್ಯತೆಯಿಂದ ಗಣೇಶ ಹಬ್ಬವನ್ನು ಆಚರಿಸಿದ್ದಾರೆ.

ಮಸೀದಿಯಲ್ಲಿನ ವಿನಾಯಕನಿಗೆ ಮುಸ್ಲಿಂ ಯುವಕರೇ ಮೊದಲ ಪೂಜೆಯನ್ನು ಸಲ್ಲಿಸಿದ್ದಾರೆ. ಮಸೀದಿಯ ವಿಘ್ನೇಶ್ವರನನ್ನು ನೋಡಲು ಗದಗ ಎಸ್ಪಿ ರೋಹನ್ ಜಗದೀಶ್, ನರಗುಂದ ಡಿವೈಎಸ್ಪಿ ಪ್ರಭು, ರೋಣ ಸಿಪಿಐ ಸೇರಿದಂತೆ ಅನೇಕರು ಆಗಮಿಸಿದ್ದರು.

ದೀಪಾವಳಿ, ದಸರಾ, ಯುಗಾದಿ, ಹೋಳಿ, ಜಾತ್ರೆ, ಮೊಹರಂ, ರಂಜಾನ್, ಈದ್‌ಮಿಲಾದ್, ಗಣೇಶ ಚತುರ್ಥಿ ಹೀಗೆ ಗ್ರಾಮದಲ್ಲಿ ಪ್ರತಿಯೊಂದು ಹಬ್ಬ ಹರಿದಿನಗಳನ್ನು ಯಾವುದೇ ಜಾತಿ-ಭೇದವಿಲ್ಲದೇ ಆಚರಿಸಿಕೊಂಡು ಬರುವ ಮೂಲಕ ಸಂದಿಗವಾಡ ಗ್ರಾಮಸ್ಥರು ಭಾವೈಕ್ಯತೆಗೆ ಸಾಕ್ಷಿಯಾಗಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments