Tuesday, June 24, 2025
26.6 C
Bengaluru
Google search engine
LIVE
ಮನೆ#Exclusive Newsವಕ್ಫ್ ಬೋರ್ಡ್ ಸಮಸ್ಯೆ ; ಶ್ರೀರಂಗಪಟ್ಟಣದಲ್ಲಿ ಪಹಣಿ ಸುಟ್ಟು ಪ್ರತಿಭಟನೆ..!

ವಕ್ಫ್ ಬೋರ್ಡ್ ಸಮಸ್ಯೆ ; ಶ್ರೀರಂಗಪಟ್ಟಣದಲ್ಲಿ ಪಹಣಿ ಸುಟ್ಟು ಪ್ರತಿಭಟನೆ..!

ವಕ್ಫ್ ಬೋರ್ಡ್ ಸಮಸ್ಯೆ ದಿನೇ ದಿನೇ ಉಲ್ಬಣಿಸುತ್ತಿದ್ದು,ರಾಜ್ಯ ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ದ ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರು  ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿ ಪ್ರತಿಭಟನೆ ನಡೆಸಿದರು.ಪಟ್ಟಣದ ಕುವೆಂಪು ವೃತ್ತದ ಬಳಿಯ ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿ ವಕ್ಫ್ ಬೋರ್ಡ್ ಹಾಗೂ ಜಮೀರ್ ಅಹಮದ್ ವಿರುದ್ದ ಘೋಷಣೆ ಕೂಗಿ ಆಕ್ರೋಶವನ್ನು ವ್ಯಕ್ತಪಡಿಸಿದರು.ಕೈಯಲ್ಲಿ ಕಬ್ಬಿನ ಜೊಲ್ಲೆ ಹಿಡಿದು, ಹೆದ್ದಾರಿಯಲ್ಲಿ RTC ಸುಟ್ಟು , ಉರುಳು ಸೇವೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು.

ಸರ್ಕಾರಿ ಶಾಲೆ ಮೇಲೂ ವಕ್ಫ್​ ದೃಷ್ಟಿ..!

ಶ್ರೀರಂಗಪಟ್ಟಣ ತಾಲೂಕಿನ ಚಂದಗಾಲು ಗ್ರಾಮದಲ್ಲಿನ ಸರ್ಕಾರಿ ಶಾಲೆಯ ಸರ್ವೆ ನಂ 215ರ 30 ಗುಂಟೆ ಜಮೀನಲ್ಲಿ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದು ಆಗಿತ್ತು. ವಕ್ಫ್ ಆಸ್ತಿ ಅಂತ 2015ರಲ್ಲೇ ಆಗಿದ್ದು, ಪಹಣಿ ಪರಿಶೀಲಿಸಿದಾಗ ತಿಳಿದುಬಂದಿತ್ತು. ವಕ್ಫ್​ ಮಂಡಳಿ ಶಾಲೆ ಜಾಗ ಕಬಳಿಕೆಗೆ ಮುಂದಾಗಿದೆ ಎಂದು ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದರು. ವಕ್ಫ ಆಸ್ತಿ ಅಂತ ನಮೂದು ಆಗಿದ್ದನ್ನು ಬದಲಾಯಿಸುವಂತೆ ಒತ್ತಾಯಿಸಿದ್ದರು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments