ವಿಜಯಪುರ: ರೈತರ ಪಹಣಿಯಿಂದ ವಕ್ಫ್ ಪದ ತೆಗೆದುಹಾಕುವಂತೆ ಆಗ್ರಹಿಸಿ ವಿಜಯಪುರ ಡಿಸಿ ಕಚೇರಿ ಬಳಿ ರೈತರಿಂದ ಅಹೋರಾತ್ರಿ ಧರಣಿ, ಪ್ರತಿಭಟನೆ ನಡೆಯುತ್ತಿದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಅಹೋರಾತ್ರಿ ಹೋರಾಟ ನಡೆಯುತ್ತಿದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಾಥ್ ನೀಡಿದ್ದಾರೆ. ಕೇಂದ್ರ ಸಚಿವೆಯೂ ಸೇರಿದಂತೆ ನೂರಾರು ರೈತರು, ಬಿಜೆಪಿ ಕಾರ್ಯಕರ್ತರು ಧರಣಿ ನಡೆಯುತ್ತಿರುವ ಪ್ರದೇಶದ ಟೆಂಟ್ನಲ್ಲೇ ರಾತ್ರಿ ಕಳೆದರು.