Wednesday, January 28, 2026
18.8 C
Bengaluru
Google search engine
LIVE
ಮನೆರಾಜಕೀಯಹೈಕಮಾಂಡ್ ಏನೇ ನಿರ್ಧಾರ ಮಾಡಿದ್ರು ಅದಕ್ಕೆ ನಾವು ಬದ್ಧ - ಮಧು ಬಂಗಾರಪ್ಪ

ಹೈಕಮಾಂಡ್ ಏನೇ ನಿರ್ಧಾರ ಮಾಡಿದ್ರು ಅದಕ್ಕೆ ನಾವು ಬದ್ಧ – ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್​​​ ನಿರ್ಧಾರವೇ ಅಂತಿಮ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲಗಳು ಇಲ್ಲ. ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಹೈಕಮಾಂಡ್ ಏನೇ ನಿರ್ಧಾರ ಮಾಡಿದ್ರು ಅದಕ್ಕೆ ನಾವು ಬದ್ಧ ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ನಮ್ಮಲ್ಲಿ ಯಾವುದೇ ಬಣ ಇಲ್ಲ. ನಾನು ಯಾರ ಬಣದಲ್ಲಿ ಇಲ್ಲ. ದೆಹಲಿಗೆ ಶಾಸಕರು ಯಾಕೆ ಹೋಗಿದ್ದಾರೆ ಅಂತ ಗೊತ್ತಿಲ್ಲ. ಸಿಎಂ ಬದಲಾವಣೆ ವಿಷಯದ ಬಗ್ಗೆ ನಮಗೇನು ಗೊತ್ತಿಲ್ಲ. 2.5 ವರ್ಷ ಅಗ್ರಿಮೆಂಟ್ ವಿಷಯ ನಮಗೇನು ಗೊತ್ತಿಲ್ಲ ಎಂದರು.

ಮಲ್ಲಿಕಾರ್ಜುನ ಖರ್ಗೆ ನಮ್ಮ ಅಧ್ಯಕ್ಷರು. ಅವರನ್ನ ಸಿಎಂ, ಡಿಸಿಎಂ ಮಾತಾಡೋದು ವಿಶೇಷ ಏನು ಅಲ್ಲ. ಏನಾದರು ಗೊಂದಲಗಳು ಇದ್ದರೆ ಹೈಕಮಾಂಡ್ ಅದನ್ನ ಸರಿ ಮಾಡುತ್ತದೆ. ಡಿಕೆ ಸುರೇಶ್ ಯಾಕೆ ಸಿಎಂ ಮಾತಿನ ಬಗ್ಗೆ ಮಾತಾಡಿದ್ರೋ ನನಗೆ ಗೊತ್ತಿಲ್ಲ. ನಾವೆಲ್ಲರು ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ. ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಸ್ಪಷ್ಟಪಡಿಸಿದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments