Monday, December 8, 2025
24.9 C
Bengaluru
Google search engine
LIVE
ಮನೆರಾಜಕೀಯರಾಜ್ಯವನ್ನು ಮಾದಕ ವ್ಯಸನ ಮುಕ್ತ ಮಾಡುತ್ತೇವೆ- ಪರಮೇಶ್ವರ್​​

ರಾಜ್ಯವನ್ನು ಮಾದಕ ವ್ಯಸನ ಮುಕ್ತ ಮಾಡುತ್ತೇವೆ- ಪರಮೇಶ್ವರ್​​

ಬೆಂಗಳೂರು: ರಾಜ್ಯವನ್ನು ಮಾದಕ ವ್ಯಸನ ಮುಕ್ತ ಮಾಡುವವರೆಗೂ ವಿರಮಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್​​​ ಅವರು ಹೇಳಿದ್ದಾರೆ..

ಬೆಂಗಳೂರು ಸಿಟಿ ಪೊಲೀಸ್​​​​​​​​ ಹಾಗೂ ಫೆಡರೇಷನ್​​​​​​ ಆಫ್​​​​ ಹಿಸ್ಟೋರಿಕ್​​​​​​ ವೆಹಿಕಲ್​​​​​​​ ಆಫ್​​​ ಇಂಡಿಯಾ ಸಹಯೋಗದಲ್ಲಿ ಪೌಲ್ ಜಾನ್ ರೆಸಾರ್ಟ್ ಮತ್ತು ಹೊಟೇಲ್ ಸಂಸ್ಥೆ ಭಾನುವಾರ ಆಯೋಜಿಸಿದ್ದ ಡ್ರಗ್ಸ್ ಮುಕ್ತ ಕರ್ನಾಟಕಕ್ಕಾಗಿ ವಿಂಟೇಜ್ ಕಾರ್ ರ್ಯಾಲಿ ಜಾಗೃತಿ ಅಭಿಯಾನಕ್ಕೆ ವಿಧಾನಸೌಧದ ಮುಂಭಾಗ ಚಾಲನೆ ನೀಡಿ ಮಾತನಾಡಿದರು.

ಕರ್ನಾಟಕ ಮಾತ್ರವಲ್ಲ ವಿಶ್ವದೆಲ್ಲೆಡೆ ಸಮಾಜ ಮಾದಕ ವ್ಯಸನದ ಜತೆ ಹೋಗುತ್ತಿದೆ. ಮಾದಕ ವಸ್ತುಗಳನ್ನು ಯಾರು ಬೆಂಬಲಿಸುತ್ತಾರೋ ಅವರು ಮನುಷ್ಯರಲ್ಲ. ಜನರ ಜೀವನದ ಜತೆ ಆಟವಾಡುತ್ತಾರೆ. ಅವರ ಭವಿಷ್ಯ, ಆರೋಗ್ಯವನ್ನು ನಾಶ ಮಾಡುತ್ತಾರೆ. ಇದನ್ನು ಮನಗಂಡು ನಮ್ಮ ಸರ್ಕಾರ ಕರ್ನಾಟಕವನ್ನು ಮಾದಕ ವ್ಯಸನ ಮಕ್ತ ರಾಜ್ಯವಾಗಿಸುವ ಬಗ್ಗೆ ಸರ್ಕಾರ ಘೋಷಿಸಿತ್ತು. ಘೋಷಣೆಯಾದ ಕೂಡಲೇ ಕರ್ನಾಟಕ ಮಾದಕ ವ್ಯಸನ ಮುಕ್ತವಾಯಿತು ಎಂದು ಅರ್ಥವಲ್ಲ.

ಅದರ ವಿರುದ್ಧ ಯುದ್ಧ ಆರಂಭಿಸಿದ್ದೇವೆ. ಸರ್ಕಾರ ಮತ್ತು ಪೊಲೀಸರು ಯುದ್ಧ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಮಾದಕ ವಸ್ತುಗಳ ಬಳಕೆಯಿಂದ ದೂರ ಇರಬೇಕು ಎಂದು ವಿದ್ಯಾರ್ಥಿ ಸಮುದಾಯ ಮತ್ತು ಐಟಿ ಪದವೀಧರರು ಸೇರಿ ಯುವ ಸಮುದಾಯಕ್ಕೆ ಪರಮೇಶ್ವ‌ರ್ ಮನವಿ ಮಾಡಿದರು. ಇದೇ ವೇಳೆ ವಿಧಾನಸೌಧದ ಮುಂಭಾಗದಿಂದ ಹೂಟ ವಿಂಟೇಜ್ ಕಾರುಗಳ ಈ ಆಕರ್ಷಕ ಮೆರವಣಿಗೆ, ಬಿಗ್ ಬನಿಯಾನ್ ವೈನ್ಯಾರ್ಡ್ ಆ್ಯಂಡ್ ರೆಸಾರ್ಟ್ ತನಕ ಸಾಗಿತು. ಸಾವಿರಾರು ಮಂದಿ ರಸ್ತೆ ಬದಿ ನಿಂತು ಮೆರವಣಿಗೆ ವೀಕ್ಷಿಸಿದರು.

ಕಾರ್ಯಕ್ರದಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಫೆಡೆರೇಷನ್ ಆಫ್ ಹಿಸ್ಟೋರಿಕಲ್ ವೆಹಿಕಲ್ ಇಂಡಿಯಾದ ಡಾ.ರವಿಪ್ರಕಾಶ್, ಚಿತ್ರನಟ ಮದನ್ ಪಟೇಲ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಕಳೆದ ವರ್ಷದಿಂದ 300 ಕೋಟಿ ರೂ.ಗೂ ಅಧಿಕ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಸಾವಿರಾರು ಜನರನ್ನು ಬಂಧಿಸಿದ್ದು, ಕೆಲವರು ಇನ್ನೂ ಜೈಲಿನಲ್ಲಿದ್ದಾರೆ. ವಿದೇಶದಿಂದ ಶಿಕ್ಷಣಕ್ಕಾಗಿ ಬಂದವರೂ ಇಂಥ ಕೃತ್ಯದಲ್ಲಿ ತೊಡಗುವುದು ದುರದೃಷ್ಟಕರ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments