MUDA ಪ್ರಕರಣವನ್ನು ಭೇದಿಸಲು ಈಗಾಗಲೇ ರಾಜ್ಯಪಾಲರು ಪ್ರಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ, ಕಾಂಗ್ರೆಸ್ ಪಕ್ಷ ರಾಜ್ಯ ವ್ಯಾಪ್ತಿಯಲ್ಲಿ ಪ್ರತಿಭಟನೆ ನಡೆಸಲು ಈಗಾಗಲೇ ಸಿದ್ಧತೆಗಳನ್ನು ಮಾಡಿಕೊಂಡಿದೆ, ಮುಖ್ಯಮಂತ್ರಿಗಳು ರಾಜಿನಾಮೆ ನೀಡಬೇಕೆಂದು ಒತ್ತಾಯಿಸಿ ವಿರೋಧ ಪಕ್ಷದ ನಾಯಕರದ R.ಅಶೋಕ್ ಈಗಾಗಲೇ ಕರೆ ಕೊಟ್ಟಿದ್ದು ನಾಳೆ ಬೆಳಗ್ಗೆ 11:30ಕ್ಕೆ ವಿಧಾನಸೌಧದಲ್ಲಿರುವ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಲು ನಿರ್ಧಾರವಾಗಿದೆ , ಮಿತ್ರ ಪಕ್ಷವಾದ ಜೆಡಿಎಸ್ ಇದಕ್ಕೆ ಬೆಂಬಲ ಸೂಚಿಸಿದ್ದು, ನಿಖಿಲ್ ಕುಮಾರಸ್ವಾಮಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಜೆಡಿಎಸ್ ಶಾಸಕರು ಸಚಿವರು , ಮುಖಂಡರು ಭಾಗವಹಿಸಿ ಬಿಜೆಪಿಗೆ ನೈತಿಕ ಬೆಂಬಲ ನೀಡಲಿದ್ದೇವೆ” ಎಂದು ಜೆಡಿಎಸ್ ನ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
