ವಿಜಯಪುರ : ಬಸ್ ದರ ಏರಿಕೆಗೆ ಸರ್ಕಾರದ ವಿರಿದ್ದ ವಿರೋಧ ಪಕ್ಷದ ನಾಯಕರು ಕೆಂಡಾಮಂಡಲ, ಕರ್ನಾಟಕ ಗಂಡಸರು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಮತ ಹಾಕಬಾರದು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.
ಬಸ್ ಟಿಕೆಟ್ ದರ 15% ಏರಿಕೆ ವಿಚಾರವಾಗಿ, ಹೆಣ್ಣುಮಕ್ಕಳಿಗೆ ಉಚಿತ ಕೊಟ್ಟು ಗಂಡಸರಿಗೆ ಹೆಚ್ಚಿನ ದುಡ್ಡು ಹಾಕಿದ್ದಾರೆ. ಗಂಡಸರು ಏನು ಪಾಪ ಮಾಡಿದ್ದಾರೆ? ಇದು ಹೆಣ್ಣು ಮಕ್ಕಳಿಗೂ ಅನ್ಯಾಯವಾಗುತ್ತದೆ. ಮಕ್ಕಳು ಮನೆಯ ಯಜಮಾನರಿಗೂ ಅನ್ಯಾಯವಾಗುತ್ತದೆ. ಇವರ ರಕ್ಷಣೆ ಮಾಡಬೇಕೆಂದರೆ ಹೆಣ್ಣು ಮಕ್ಕಳೂ ಸಹ ಕಾಂಗ್ರೆಸ್ಗೆ ಮತ ಹಾಕಬಾರದೆಂದು ಎಂದು ವಿರೋಧ ವ್ಯಕ್ತಪಡಿಸಿದ್ದಾರೆ