Thursday, January 29, 2026
16.4 C
Bengaluru
Google search engine
LIVE
ಮನೆಜಿಲ್ಲೆರಾಜ್ಯ ಬಿಟ್ಟು ನನ್ನನ್ನು ಏಕೆ ಕಳಿಸ್ತೀರಿ,ನಾನು ಇಲ್ಲೇ ಇರೋಣ ಅಂದ್ಕೊಂಡಿದ್ದೇನೆ ಎಚ್‌ಡಿ ಕುಮಾರಸ್ವಾಮಿ ಅಚ್ಚರಿ...

ರಾಜ್ಯ ಬಿಟ್ಟು ನನ್ನನ್ನು ಏಕೆ ಕಳಿಸ್ತೀರಿ,ನಾನು ಇಲ್ಲೇ ಇರೋಣ ಅಂದ್ಕೊಂಡಿದ್ದೇನೆ ಎಚ್‌ಡಿ ಕುಮಾರಸ್ವಾಮಿ ಅಚ್ಚರಿ ಹೇಳಿಕೆ

ಹಾಸನ : ಲೋಕಸಭಾ ಚುನಾವಣೆಗೆ ನಾನು ಸ್ಪರ್ಧೆ ಮಾಡಬೇಕು ಅಂತ ನಿಮಗೆ ಆಸೆ ಇದೆಯಾ? ರಾಜ್ಯ ಬಿಟ್ಟು ನನ್ನ ಏಕೆ ಕಳಿಸ್ತೀರಿ. ನಾನು ರಾಜ್ಯದಲ್ಲಿ ಇರೋಣ ಅಂತ ಇದ್ದೇನೆ . ಎಂಉ ಮಾಜಿ ಸಿಎಂ ಕುಮಾರಸ್ವಾಮಿ ಅಚ್ಚರಿ ಹೇಳಿಕೆ ಕೊಟ್ಟಿದ್ದಾರೆ..

ಹಾಸನದಲ್ಲಿ ಮಾತಾಡಿದ ಹೆಚ್ಡಿಕೆ ಎಲ್ಲ ಕಡೆ ಕೇಳ್ತಾರೆ, ಈ ಸಲ ನಿಂತರೆ ನೀವು ಕೇಂದ್ರದಲ್ಲಿ ಮಂತ್ರಿ ಆಗ್ತಿರಿ. ರಾಜ್ಯಕ್ಕೆ ಒಳ್ಳೆಯದಾಗುತ್ತೆ ನೀವು ನಿಲ್ಲಬೇಕು, ನಿಲ್ಲಬೇಕು ಅಂತಾರೆ. ನಾನು ಆ ವಿಷಯದಲ್ಲಿ ಈ ಕ್ಷಣದವರೆಗೂ ಯಾವುದೇ ತೀರ್ಮಾನ ಮಾಡಿಲ್ಲ ಎಂದರು.

ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಮಂಡ್ಯದಲ್ಲೂ ನೀವೇ ನಿಲ್ಲಬೇಕು ಅಂತಾರೆ. ಇಲ್ಲಿ ನಮ್ಮ ಹಾಸನ ಜಿಲ್ಲೆಯಲ್ಲಿ ದೇವೇಗೌಡರು ನಿಲ್ಲದೇ ಇದ್ದರೆ ನೀವೇ ಬಂದುಬಿಡಿ ಅಂತಾರೆ. ಅಭಿಮಾನದಲ್ಲಿ ಮಾತನಾಡುತ್ತಾರೆ, ಆಗಂತ ಹೇಳಿ ಎಲ್ಲ ಕಡೆ ನಾನೇ ನಿಲ್ಲಲು ಆಗುತ್ತಾ? ಮುಂದೆ ನೋಡೋಣ ಏನೇನ್ ಮಾಡಬೇಕು ಎಂದು ತಿಳಿಸಿದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments