ಜಿಲ್ಲೆ
ಯತ್ನಾಳ್ ಉಚ್ಚಾಟನೆ ದುರಾದೃಷ್ಟಕರ; ಸಚಿವ ಶರಣಪ್ರಕಾಶ್ ಪಾಟೀಲ್

ಕಲಬುರಗಿ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕುಟುಂಬ ರಾಜಕಾರಣದದ ವಿರುದ್ಧ ಹೋರಾಟ ಮಾಡಿದ್ದಾರೆ. ಅಂಥವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ್ದು ದುರಾದೃಷ್ಟಕರ ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ಹೇಳಿದರು.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜಕಾರಣದಲ್ಲಿ ಉಚ್ಚಾಟನೆಯಂತಹ ಘಟನೆಗಳು ನಡೆಯಬಾರದು. ಕಾಂಗ್ರೆಸ್ ಪಕ್ಷಕ್ಕೆ ಯತ್ನಾಳ್ ಅವರನ್ನು ಕರೆತರಲು ತಾವು ಸಾಮರ್ಥ್ಯ ಹೊಂದಿಲ್ಲ. ಅದಕ್ಕಾಗಿ ಬೇರೆ ವ್ಯಕ್ತಿಗಳು ಇದ್ದಾರೆ ಎಂದು ಹೇಳಿದ್ರು.




